ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಝಾಕೀರ್ ಸವಣೂರು : ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು

ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ 2022 ಜುಲೈ 26 ರಂದು ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದರು. ಪ್ರವೀಣ್ ನೆಟ್ಟಾರು ಅವರು ಬೆಳ್ಳಾರೆಯಲ್ಲಿ ಅಕ್ಷಯ ಚಿಕನ್ ಸೆಂಟರ್ ನಡೆಸುತ್ತಿದ್ದರು. ಆ ಅಂಗಡಿಯ ಎದುರೇ ಕೊಲೆ ನಡೆದಿತ್ತು. ಅದರಲ್ಲಿ 26 ಮಂದಿಯನ್ನು ಎನ್ ಐ ಎ ಅಧಿಕಾರಿಗಳು ಬಂಧಿಸಿದ್ದರು. ಅದರಲ್ಲಿ ಈಗ 18 ನೆ ಆರೋಪಿ ಝಾಕೀರ್ ಸವಣೂರು (35) ಗೆ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.

ಈ ಹಿಂದೆ ಸೋಮವಾರಪೇಟೆಯ ಎಚ್. ವೈ ರಿಯಾಜ್ ಎಂಬಾತನಿಗೆ ಜಾಮೀನು ಸಿಕ್ಕಿತ್ತು. ಇವನು ಆರೋಪಿಗಳಿಗೆ ಆಶ್ರಯ ನೀಡಿದ್ದ ಎಂಬ ಕಾರಣಕ್ಕೆ ಬಂಧಿಸಲಾಗಿತ್ತು. ಎಚ್. ವೈ ರಿಯಾಜ್ ಪ್ರಕರಣದ 26 ನೇ ಆರೋಪಿಯಾಗಿದ್ದಾನೆ.

ಈಗ ಜಾಮೀನು ಪಡೆದಿರುವ ಆರೋಪಿ ಝಾಕೀರ್ ಸವಣೂರು (35) ಹತ್ಯೆ ಸಂಚಿನಲ್ಲಿ ನೇರವಾಗಿ ಭಾಗಿಯಾದವರಲ್ಲಿ ಒಬ್ಬನಾಗಿದ್ದು, ಪ್ರಕರಣದ ಆರಂಭದಲ್ಲೇ ಬಂಧಿಸಲ್ಪಟ್ಟಿದ್ದಾನೆ. ಈತನನ್ನು ಬೆಳ್ಳಾರೆಯ ಶಫೀಕ್ ಎಂಬಾತನೊಂದಿಗೆ ಜುಲೈ 28 ರಂದು ವಶಕ್ಕೆ ಪಡೆದಿದ್ದರು.