ತಮಿಳುನಾಡು :ಹೊಸ ಸರಕಾರದಿಂದ ಮತ್ತೆ ಮೇಕೆದಾಟು ಕಿರಿಕಿರಿ

ತಮಿಳುನಾಡಿನ ವಿಜಯ್ ನೇತೃತ್ವದ ಹೊಸ ಸರ್ಕಾರವು ಕರ್ನಾಟಕದ ಮೇಕೆದಾಟು ಯೋಜನೆಯನ್ನು ವಿರೋಧಿಸಲು ಎಲ್ಲಾ ಕಾನೂನು ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ.


​ತಮಿಳುನಾಡಿನ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಆಳೇಕರ್ ಅವರು, ಕಾವೇರಿ ನದಿ ತಮಿಳುನಾಡಿನ ರೈತರ ಜೀವನಾಡಿಯಾಗಿದ್ದು, ಕರ್ನಾಟಕದ ಯೋಜನೆಯು ರೈತರಿಗೆ ತೊಂದರೆ ಉಂಟುಮಾಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
​ ಅದೇ ಸಮಯದಲ್ಲಿ, ಮೇಕೆದಾಟು ಯೋಜನೆಯು ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲಕರವಾಗಿದೆ ಎಂದು ಕರ್ನಾಟಕದ ದೃಷ್ಟಿಕೋನವನ್ನು ವ್ಯಕ್ತಪಡಿಸಲಾಗಿದೆ. ತಮಿಳುನಾಡಿನ ರೈತರ ಹಿತಾಸಕ್ತಿಗೆ ವಿರುದ್ಧವಾದ ಕರ್ನಾಟಕ ಮೇಕೆದಾಟು ಯೋಜನೆಯನ್ನು ಸ್ಥಗಿತಗೊಳಿಸಲು ಕೈಗೊಳ್ಳಬಹುದಾದ ಎಲ್ಲಾ ಕಾನೂನಾತ್ಮಕ ಪ್ರಯತ್ನಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
​ ಕಾವೇರಿ ನದಿ ಪಾತ್ರದ ರೈತರು ಕಾವೇರಿ ನದಿ ನೀರನ್ನು ಬಳಸುವ ಹಕ್ಕು ಹೊಂದಿದ್ದಾರೆಯೆಂದು ಸುಪ್ರೀಂ ಕೋರ್ಟ್ ಹೇಳಿದ್ದರೂ, ಕರ್ನಾಟಕ ಸರ್ಕಾರ ತಮಿಳುನಾಡಿಗೆ ಸಿಗಬೇಕಾದ ಕಾವೇರಿ ನೀರಿನ ಪಾಲನ್ನು ಸರಿಯಾಗಿ ನೀಡದೇ ಕೇವಲ ಹೆಚ್ಚುವರಿ ನೀರನ್ನು ಮಾತ್ರ ಪ್ರತಿ ವರ್ಷ ಹರಿಸುತ್ತದೆ.


ಇದಕ್ಕೆ ಉತ್ತರಿಸಿರುವ ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ​ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೇ ಹೆಚ್ಚು ಅನುಕೂಲ, ಅವರ ಪಾಲಿನ ನೀರನ್ನು ಅವರಿಗೆ ಕೊಟ್ಟೆ ಕೊಡುತ್ತೇವೆ. ತಮಿಳುನಾಡು, ಕರ್ನಾಟಕದ ಜನರೆಲ್ಲರೂ ಭಾರತೀಯರು. ಹಾಗಾಗಿ ಯಾವಾಗ ಬೇಕಾದರೂ ಮಾತುಕತೆಗೆ ಸಿದ್ಧ… ಎಂದು ಹೇಳಿದರು.