ಜೂನ್ 28 ರಂದು ದೇಶಾದ್ಯಂತ ಪಲ್ಸ್ ಪೋಲಿಯೊ

ಕಾಸರಗೋಡು : ಜೂನ್ 28 ರಂದು ದೇಶಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದೆ. ಐದು ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ರೋಗದಿಂದ ಮುಕ್ತವಾಗಿಸಲು ಹಾಕಿಸಲಾಗುತ್ತದೆ. ರಾಜ್ಯದಲ್ಲಿ ಅಂದಾಜು 19000 ಮಕ್ಕಳಿಗೆ ಪೋಲಿಯೋ ಹಾಕಿಸುವ ಗುರಿಯನ್ನು ಸರಕಾರ ಹೊಂದಿದೆ.

ಸರ್ಕಾರಿ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳು, ಅಂಗನವಾಡಿಗಳು, ಶಾಲೆಗಳು, ವಾಚನಾಲಯಗಳು, ಸ್ವಯಂಸೇವಾ ಸಂಸ್ಥೆಗಳ ಕಟ್ಟಡಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗುತ್ತದೆ. ಅಲ್ಲದೆ, ಪ್ರಯಾಣದಲ್ಲಿರುವ ಮಕ್ಕಳಿಗಾಗಿ ಟ್ರಾನ್ಸಿಟ್, ಮೊಬೈಲ್ ಮತ್ತು ವಿಶೇಷ ಬೂತ್‌ಗಳನ್ನು ಏರ್ಪಡಿಸಲಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಸಮೀಪದ ಲಸಿಕಾ ಕೇಂದ್ರಕ್ಕೆ ಕರೆತಂದು ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

ಕಳೆದುಕೊಂಡ ಬ್ರೇಸ್ಲೆಟ್ ಪತ್ತೆ : 1 ಲಕ್ಷ ರೂ. ಬಹುಮಾನ ಪಡೆದುಕೊಂಡ ಯುವತಿ

ಫೋಟೋ ಕೃಪೆ : Suddi news

ಸುಳ್ಯದ ಗಾಂಧಿನಗರದಲ್ಲಿ ಕಳೆದುಹೋಗಿದ್ದ 6 ಪವನ್ ತೂಕದ ಚಿನ್ನದ ಬ್ರೇಸ್‌ಲೆಟ್ ಕಳೆದುಕೊಂಡವರು ಅದನ್ನು ಮರಳಿ ಪಡೆದಿದ್ದಾರೆ. ಅದನ್ನು ಕಂಡುಕೊಂಡ ಕೇರಳ ಮೂಲದ ಯುವತಿ, ಪ್ರಾಮಾಣಿಕವಾಗಿ ಮಾಲೀಕರಾದ ಭೋಜಪ್ಪ ಅಜಿಲ ಅವರಿಗೆ ಹಿಂದಿರುಗಿಸಿದ್ದಾರೆ.

ಅದು ಸಿಕ್ಕಿದವರಿಗೆ ಭೋಜಪ್ಪ ಅಜಿಲರು 1 ಲಕ್ಷ ರೂ. ಬಹುಮಾನ ಘೋಷಿಸಿದ್ದರು. ಅವರು ಜೂನ್ 21 ರಂದು ಸುಳ್ಯದ ಗಾಂಧೀನಗರದಲ್ಲಿ ತಮ್ಮ ಬ್ರೇಸ್ ಲೇಟ್ ನ್ನು ಕಳೆದುಕೊಂಡಿದ್ದಾಗಿ ಅಂದುಕೊಂಡಿದ್ದರು. ಆದರೆ ಜಾಲ್ಸುರಿನಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ಕಾರು ಹತ್ತುವ ಸಂದರ್ಭದಲ್ಲಿ ಕಳಚಿ ಬಿದ್ದಿತ್ತು.

ಅದು ಕೇರಳದ ಚಟ್ಟಂಚಾಲಿನ ಯುವತಿಗೆ ಸಿಕ್ಕಿದ್ದು, ಹಿಂದಿರುಗಿಸಿದ್ದಾರೆ. ಮೊದಲೇ ಹೇಳಿದಂತೆ ಭೋಜಪ್ವರು, ಯುವತಿಗೆ ಒಂದು ಲಕ್ಷ ರೂಪಾಯಿ ನಗದು ಮತ್ತು ಚಿನ್ನದ ಉಂಗುರವನ್ನು ಬಹುಮಾನ ರೂಪದಲ್ಲಿ ನೀಡಿ ಧನ್ಯವಾದ ತಿಳಿಸಿದ್ದಾರೆ.

​ಮಂಜನಾಡಿ ಗುಡ್ಡ ಕುಸಿತದ ಸಂತ್ರಸ್ತೆ ಶ್ರೀಮತಿ ಅಶ್ವಿನಿ ಮನೆಗೆ ಶಾಸಕ ಕಿಶೋರ್ ಕುಮಾರ್ ಭೇಟಿ: ಬದುಕಿಗೆ ಭರವಸೆಯ ಆಸರೆ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ 12 ವರ್ಷಗಳ ‘ವಿಶ್ವಾಸ, ವಿಕಾಸ ಮತ್ತು ಜನ ಕಲ್ಯಾಣ’ದ ಪ್ರಯುಕ್ತ
ಮಂಗಳೂರು ಮಂಡಲದ ವಿಶೇಷ ಪ್ರವಾಸದಲ್ಲಿ ಇದ್ದ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರುರವರು ಕಳೆದ ವರ್ಷ ಮಂಗಳೂರು ಉಳ್ಳಾಲ ಸಮೀಪದ ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ತನ್ನ ಇಡೀ ಪ್ರಪಂಚವನ್ನೇ ಕಳೆದುಕೊಂಡು, ಅತೀವ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ನೊಂದ ಮಹಿಳೆ ಶ್ರೀಮತಿ ಅಶ್ವಿನಿ ಅವರು ಮನೆಗೆ ಇಂದು ಖುದ್ದಾಗಿ ಭೇಟಿ ನೀಡಿ ಸಾಂತ್ವನ ಹೇಳಿದರು. ಕರುಳು ಹಿಂಡುವ ಈ ದುರಂತದ ಬಳಿಕ ಚಿಂತಾ ಜನಕ ಪರಿಸ್ಥಿತಿಯಲ್ಲಿರುವ ಕುಟುಂಬಕ್ಕೆ ವೈಯಕ್ತಿಕವಾಗಿ ಹಾಗೂ ಸರ್ಕಾರದ ಮಟ್ಟದಲ್ಲಿ ಸಂಪೂರ್ಣ ಬೆಂಬಲವಾಗಿ ನಿಲ್ಲುವ ಭರವಸೆಯನ್ನು ಶಾಸಕರು ತುಂಬಿದರು.
ಕಳೆದ ವರ್ಷ ಸುರಿದ ಭಾರಿ ಮಳೆಯಿಂದಾಗಿ ಮಂಜನಾಡಿಯಲ್ಲಿ ಸಂಭವಿಸಿದ ಗುಡ್ಡ ಕುಸಿತವು ಅಶ್ವಿನಿ ಅವರ ಬದುಕನ್ನೇ ನುಚ್ಚುನೂರು ಮಾಡಿತು. ಈ ಭೀಕರ ದುರಂತದಲ್ಲಿ ಅಶ್ವಿನಿ ಅವರು ತಮ್ಮಿಬ್ಬರು ಮುದ್ದಾದ ಮಕ್ಕಳು ಹಾಗೂ ಅತ್ತೆಯನ್ನು ಕಳೆದುಕೊಂಡಿದ್ದರು. ಕೇವಲ ಪ್ರಾಣ ಹಾನಿಯಷ್ಟೇ ಅಲ್ಲದೆ, ಪ್ರಕೃತಿಯ ವಿಕೋಪಕ್ಕೆ ಅಶ್ವಿನಿಯವರು ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡರೆ ಅವರ ಮಾಬ ಒಂದು ಕಾಲನ್ನು ಕಳೆದುಕೊಂಡು ಶಾಶ್ವತ ಅಂಗವಿಕಲಕ್ಕೆ ತುತ್ತಾಗಿದ್ದಾರೆ. ಕಣ್ಣ ಮುಂದೆಯೇ ಇಡೀ ಕುಟುಂಬ ಹಾಗೂ ಕಟ್ಟಿದ ಮನೆ ಮಣ್ಣು ಪಾಲಾಗಿ ಇಂದು ಎರಡು ಕಾಲುಗಳಿಲ್ಲದೆ ದೈನಂದಿನ ಜೀವನ ನಡೆಸಲು ಪರದಾಡುತ್ತಿರುವ ಅಶ್ವಿನಿ ಅವರ ಪರಿಸ್ಥಿತಿ ಕಂಡು ಶಾಸಕ ಕಿಶೋರ್ ಕುಮಾರ್ ಅವರು ತೀವ್ರ ಭಾವುಕರಾದರು.


ಅಶ್ವಿನಿ ಅವರ ಕಣ್ಣೀರು ಒರೆಸಿ ದೈರ್ಯ ತುಂಬಿದ ಶಾಸಕರು ನೀವು ಒಂಟಿಯಲ್ಲ ಈ ಕಷ್ಟದ ಸಮಯದಲ್ಲಿ ನಿಮ್ಮ ಕುಟುಂಬದ ಜೊತೆಗೆ ನಾವಿದ್ದೇವೆ ನೀವು ಕಳೆದುಕೊಂಡಿರುವ ಜೀವಗಳನ್ನು ಮರಳಿ ತರಲು ಸಾಧ್ಯವಿಲ್ಲ ಆದರೆ ನಿಮ್ಮ ಮುಂದಿನ ಬದುಕಿಗೆ ಆಸರೆಯಾಗಿ ನಿಲ್ಲುವ ಜವಾಬ್ದಾರಿ ನಮ್ಮದಾಗಿದೆ ನಿಮ್ಮ ಬದುಕನ್ನು ಕಟ್ಟಿಕೊಳ್ಳಲು ಹಾಗೂ ಸರ್ಕಾರದಿಂದ ನಿಮಗೆ ಸಿಗಬೇಕಾದ ಹಕ್ಕು ಸೂಕ್ತ ಪರಿಹಾರ ಮತ್ತು ಪುನರ್ವಸತಿಗಾಗಿ ನಡೆಯುವ ಪ್ರತಿಯೊಂದು ಹೋರಾಟದಲ್ಲೂ ನಾನು ನಿಮ್ಮ ಜೊತೆಗೆ ನಿಲ್ಲುತ್ತೇನೆ ಎಂದು ಆಶ್ವಾಸನೆ ನೀಡಿದರು. ಇದೇ ಸಂದರ್ಭದಲ್ಲಿ ಅಶ್ವಿನಿಯವರ ವೈದ್ಯಕೀಯ ವೆಚ್ಚಗಳು ಹಾಗೂ ಪ್ರಸ್ತುತ ಜೀವನ ನಿರ್ವಹಣೆಯ ಕುರಿತು ಮಾಹಿತಿ ಪಡೆದುಕೊಂಡ ಶಾಸಕರು ಜಿಲ್ಲಾಡಳಿತದಿಂದ ಹಾಗೂ ಸರ್ಕಾರದ ಮಟ್ಟದಿಂದ ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ತುರ್ತಾಗಿ ಒದಗಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ರಕ್ಷಣಾ ವೇ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೆತ್ತಬೈಲ್, ಜಿಲ್ಲೆಯ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಡಲ ಪ್ರಧಾನಕಾರ್ಯದರ್ಶಿಗಳಾದ ಮೋಹನ್ ರಾಜ್ ಕೆ ಆರ್, ದಯಾನಂದ ತೊಕ್ಕೊಟ್ಟು, ಉಪಾಧ್ಯಕ್ಷರಾದ ಸುಮನ ಹರೀಶ್ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷರಾದ ಮುರಳಿಧರ ಕೊಣಾಜೆ, ರೈತ ಮೋರ್ಚ ಅಧ್ಯಕ್ಷರಾದ ಪದ್ಮನಾಭ ಗಟ್ಟಿ, ಮಂಡಲದ ಕೋಶಾಧಿಕಾರಿ ಸುಮಲತಾ ಕೊಣಾಜೆ, ಶಕ್ತಿಕೇಂದ್ರ ಪ್ರಮುಖ ಸುಧಾಕರಗಟ್ಟಿ ಮತ್ತಿತರರು ಉಪಸ್ಥಿತರಿದ್ದರು

ದಕ್ಷಿಣ ಅಮೇರಿಕಾದಲ್ಲಿ ತೀವ್ರ ಭೂಕಂಪ : ಅಪಾರ ಸಾವು, ನೋವು ಸಾಧ್ಯತೆ

ಫೋಟೋ ಕೃಪೆ : BBC news

ದಕ್ಷಿಣ ಅಮೆರಿಕಾದ ಉತ್ತರ ಕರಾವಳಿಯಲ್ಲಿರುವ ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್‌ನಲ್ಲಿ ಕೆಲವೇ ಸೆಕೆಂಡುಗಳ ಅಂತರದಲ್ಲಿ ಸಂಭವಿಸಿದ ಎರಡು ಭೀಕರ ಭೂಕಂಪಗಳ ನಂತರ, ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಮೊದಲ ಭೂಕಂಪವು 7.2 ಮತ್ತು ಎರಡನೆಯದು 7.5 ತೀವ್ರತೆಯನ್ನು ದಾಖಲಿಸಿವೆ.

​ಕುಸಿದು ಬಿದ್ದಿರುವ ಬಹುಮಹಡಿ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ತಂಡಗಳು ಶೋಧ ಕಾರ್ಯ ನಡೆಸುತ್ತಿವೆ. ಭೂಕಂಪದಿಂದಾಗಿ ವೆನೆಜುವೆಲಾದ ಮುಖ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೀವ್ರ ಹಾನಿಯಾದ ಕಾರಣ ಅದನ್ನು ಮುಚ್ಚಲಾಗಿದೆ.

​ರೊಡ್ರಿಗಸ್ ಅವರು ತಮ್ಮ ಸಂತಾಪವನ್ನು ಸೂಚಿಸಿದ್ದಾರೆ, ಆದರೆ ಎಷ್ಟು ಜನರು ಮೃತಪಟ್ಟಿದ್ದಾರೆ ಎಂಬ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಅತ್ತ, ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆಯು (US Geological Survey) ಹೆಚ್ಚಿನ ಸಾವುನೋವುಗಳು ಮತ್ತು ವ್ಯಾಪಕ ಹಾನಿಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದು, ಈ ವಿಪತ್ತು ವ್ಯಾಪಕವಾಗಿ ಹರಡಿರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

​ಅಂದು ರಾಷ್ಟ್ರೀಯ ರಜಾದಿನವಾಗಿದ್ದರಿಂದ, ಸ್ಥಳೀಯ ಕಾಲಮಾನ 18:04 ಗಂಟೆಗೆ (ಭಾರತೀಯ ಕಾಲಮಾನದ ಪ್ರಕಾರ 23:04 BST) ಭೂಕಂಪ ಸಂಭವಿಸಿದಾಗ ಅನೇಕ ಜನರು ತಮ್ಮ ಮನೆಗಳಲ್ಲಿದ್ದರು.

​ಈ ಭೂಕಂಪಗಳು ಕ್ಯಾರಕಾಸ್‌ನ ಪಶ್ಚಿಮ ಭಾಗದಲ್ಲಿ ಸಂಭವಿಸಿದ್ದು, ಇದರ ಅನುಭವ ಇಡೀ ದೇಶದಾದ್ಯಂತ ಮತ್ತು ಕೊಲಂಬಿಯಾದ ಬೊಗೋಟಾದವರೆಗೂ ಉಂಟಾಗಿದೆ.

​ನಮ್ಮ ಸ್ಪ್ಯಾನಿಷ್ ಭಾಷೆಯ ವೆಬ್‌ಸೈಟ್ ‘ಬಿಬಿಸಿ ನ್ಯೂಸ್ ಮುಂಡೋ’ (BBC News Mundo) ಈ ಬಗ್ಗೆ ಲೈವ್ ಅಪ್‌ಡೇಟ್‌ಗಳನ್ನು ನೀಡುತ್ತಿದೆ.