ಮುಂಗಾರು ಮಳೆ ಎಫೆಕ್ಟ್ : ಶಾಲಾ ಕಾಲೇಜುಗಳಿಗೆ ರಜೆ

ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಶುರುವಾದ ಎರಡೇ ದಿನಕ್ಕೆ ಕರ್ನಾಟಕದಲ್ಲಿ ಮಳೆಗಾಲ ಆರಂಭವಾಗಿದೆ. ಎಲ್ಲಾ ರಾಜ್ಯಗಳಲ್ಲೂ ಮುಂಗಾರು ಕಾಲಿಟ್ಟಿದೆ.

ಕೇರಳದ ಕೊಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಶಾಲಾ ಕಾಲೇಜುಗಳು ಹಾಗೂ ಇದರ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ಉಳಿದ ಕೆಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. 24 ಗಂಟೆಗಳಲ್ಲಿ ಸಹಿತ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆಯಿಂದಾಗಿ ನೀರಿನ ಮೂಲಗಳಲ್ಲಿ ನೀರಿನ ಮಟ್ಟ ಏರುತ್ತಿದೆ. ಪ್ರವಾಸೋದ್ಯಮಕ್ಕೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಹಾಗೂ ಎಚ್ಚರಿಕೆ ವಹಿಸಲಾಗಿದೆ. ಹಾಗೂ ನದಿಗಳಲ್ಲಿ, ಸಮುದ್ರಗಳಲ್ಲಿ ಮೀನುಗಾರಿಕೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ