ಯುಪಿಎಸ್‌ಸಿ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ವಿಶ್ವ ವರ್ಧನ್

ಪಾಟ್ನಾ, ಜೂ. 08  ಯುಪಿಎಸ್‌ಸಿ ಪರೀಕ್ಷೆಯು ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದು. ಈ ಪರೀಕ್ಷೆಗಾಗಿ ಕೆಲವರು ತಮ್ಮ ವೃತ್ತಿಯನ್ನೇ ತೊರೆಯುತ್ತಾರೆ. ಹೀಗೆ ತಮ್ಮ ನೇವೀಯ ವೃತ್ತಿಯನ್ನು ತೊರೆದು ಯುಪಿಎಸ್‌ಸಿ ಪರೀಕ್ಷೆ ಬರೆದು ರ್‍ಯಾಂಕ್ ನೊಂದಿಗೆ ಉತ್ತೀರ್ಣರಾಗಿದ್ದಾರೆ.

ವಿಶ್ವ ಅವರು ಪಾಟ್ನಾದ ಲೊಯೋಲಾ ಹೈಸ್ಕೂಲ್‌ನಲ್ಲಿ ಶಾಲಾ ಶಿಕ್ಷಣವನ್ನು ಪೂರೈಸಿದರು. ನಂತರ ಇಂಡಿಯನ್ ಮ್ಯಾರಿಟೈಮ್ ಯೂನಿವರ್ಸಿಟಿಯಲ್ಲಿ ನಾಟಿಕಲ್ ಸೈನ್ಸ್ನಲ್ಲಿ ಪದವಿ ಪಡೆದು, ಶಿಕ್ಷಣದ ನಂತರ, ಮರ್ಚೆಂಟ್ ನೇವಿಗೆ ಸೇರಿ ಕೆಮಿಕಲ್ ಟ್ಯಾಂಕರ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ, 2019ರಲ್ಲಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ, ಯುಪಿಎಸ್‌ಸಿ ಪರೀಕ್ಷೆಯ ತಯಾರಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲು ನಿರ್ಧರಿಸಿದರು.

2024ರಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆದ ಅವರು 101ನೇ ಅಖಿಲ ಭಾರತ ರ‍್ಯಾಂಕ್ ಗಳಿಸಿದರು. ಈ ಮೂಲಕ ಅನೇಕ ಯುಪಿಎಸ್‌ಸಿ ಅಭ್ಯರ್ಥಿಗಳಿಗೆ ವಿಶ್ವ ಅವರು ಮಾದರಿಯಾಗಿದ್ದಾರೆ.

ಮಥುರಾ ಮೆನ್ಸ್ ಡ್ರೆಸ್ ಕೋಡ್, ವಿಟ್ಲ – ವಿಶೇಷ ಆಫರ್

ಮಥುರಾ ಮೆನ್ಸ್ ಡ್ರೆಸ್‌ಕೋಡ್ (Mathura Mens Dresscode), ವಿಟ್ಲದಲ್ಲಿ ವಿಶೇಷ ಆಫರ್!

​ವಿಟ್ಲದ ‘ಮಥುರಾ ಮೆನ್ಸ್ ಡ್ರೆಸ್‌ಕೋಡ್’ ಬಟ್ಟೆಯ ಅಂಗಡಿಯಲ್ಲಿ ಗ್ರಾಹಕರಿಗಾಗಿ ಆಕರ್ಷಕ ರಿಯಾಯಿತಿ ದರದಲ್ಲಿ ವಿಶೇಷ ಆಫರ್ ಘೋಷಿಸಲಾಗಿದೆ.

​ಆಫರ್ 1: 3 ಶರ್ಟ್‌ಗಳು ಕೇವಲ ₹999/- ಕ್ಕೆ ಲಭ್ಯ.
​ಆಫರ್ 2: 1 ಶರ್ಟ್ + 1 ಪ್ಯಾಂಟ್ (Pant) ಜೋಡಿಗೆ ₹999/-.

ಈ ಆಫರ್ ಜೂನ್ 06, 2026 ರಿಂದ ಜೂನ್ 20, 2026 ರವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ.

ವಿಳಾಸ: ಮೊದಲನೇ ಮಹಡಿ, ಹೊಳ್ಳ ಕಾಂಪ್ಲೆಕ್ಸ್, ಖಾಸಗಿ ಬಸ್ ನಿಲ್ದಾಣದ ಹತ್ತಿರ, ವಿಟ್ಲ.

​ಸಂಪರ್ಕ ಸಂಖ್ಯೆ: 918197569772

​ನೀವು ಹೊಸ ಬಟ್ಟೆಗಳನ್ನು ಖರೀದಿಸಲು ಯೋಜಿಸುತ್ತಿದ್ದರೆ, ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಿ.

ಕರ್ನಾಟಕದಲ್ಲಿ ಶುರುವಾದ ಮುಂಗಾರು – 2 ಜಿಲ್ಲೆಗಳಿಗೆ ರೆಡ್ ಅಲರ್ಟ್

ರಾಜ್ಯದಲ್ಲಿ ಮುಂಗಾರು ಶುರುವಾಗಿದೆ. ಮಳೆಯ ಆರ್ಭಟ ಜೋರಾಗುತ್ತಿದ್ದು , ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಳೆಗಾಲ ಶುರುವಾಗಿದೆ. ಹಾಗೂ ಜನ ಪರದಾಡುತ್ತಿದ್ದಾರೆ.

ಜಿಲ್ಲೆಯ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇದರ ಜೊತೆಗೆ ರಾಜ್ಯದ 7 ಜಿಲ್ಲೆಗೆ ಆರೆಂಜ್ ಅಲರ್ಟ್ ಮತ್ತು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಅರಬ್ಬೀ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಕನ್ನಡ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕ ಮಂಗಳೂರು, ಕೊಡಗು, ರಾಯಚೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಹಾಸನ , ತುಮಕೂರು, ಚಿಕ್ಕ ಬಳ್ಳಾಪುರ, ಗದಗ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

ಆಪರೇಷನ್ ಶೆರಾವಲಿ ವೇಳೆ ನಡೆದ ದುರಂತ – ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ ಬಿದ್ದು ಸೇನಾಧಿಕಾರಿ ಬೀರೇಶ್ವರ್ ಗೊಸ್ವಾಮಿ ಅವರು ಮೃತಪಟ್ಟಿದ್ದಾರೆ.

ರಾಜೌರಿ ದುರ್ಗಮ ಕಾಡುಗಳಲ್ಲಿ ಪಾಕಿಸ್ತಾನಿ ಭಯೋತ್ಪಾದಕರು ಅಡಗಿದ್ದರು. ಅವರನ್ನು ಪತ್ತೆಹಚ್ಚಲು ಕಳೆದ 15 ದಿನಗಳಿಂದ ನಡೆಯುತ್ತಿರುವ ಉಗ್ರರ ವಿರುದ್ಧದ ಜಂಟಿ ಕಾರ್ಯಾಚರಣೆ ವೇಳೆ ಈ ದುರಂತ ಸಂಭವಿಸಿದೆ.

ಜಮ್ಮು ಕಾಶ್ಮೀರ ಪೊಲೀಸ್‌ ಮತ್ತು ಅರೆಸೈನಿಕ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ಮುನ್ನಡೆಸುತ್ತಿದ್ದು, ಶನಿವಾರ ಸಂಜೆ ಡೋರಿಮಲ್‌ ಪ್ರದೇಶದ ಕಡಿದಾದ ಬಂಡೆಗಳು ಹಾಗೂ ದುರ್ಗಮ ಪರ್ವತಗಳ ನಡುವೆ ಕಾರ್ಯಾಚರಣೆಯಲ್ಲಿದ್ದಾಗ, ಹವಾಮಾನ ವೈಪರೀತ್ಯ ಹಾಗೂ ಅಪಾಯಕಾರಿ ಭೌಗೋಳಿಕ ಪರಿಸ್ಥಿತಿಯಿಂದಾಗಿ ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ಅವರು ಕಾಲು ಜಾರಿ ಕಮರಿಗೆ ಬಿದ್ದರು.

ತಕ್ಷಣ ಜೊತೆಯಲ್ಲಿದ್ದವರು ರಕ್ಷಣಾ ಕಾರ್ಯಾಚರಣೆ ನಡೆಸಿ, ಅವರನ್ನು ಹೊರತೆಗೆದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಬೀರೇಶ್ವರ್ ಗೋಸ್ವಾಮಿ ಸಾವನ್ನಪ್ಪಿದ್ದಾರೆ.

ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ 5 ನೇ ವಾರ್ಡ್ ನ ರಸ್ತೆ ಉದ್ಘಾಟನೆ

ಮಂಗಳೂರು ವಿಧಾನಸಭಾ ಕ್ಷೇತ್ರದ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ 5ನೇ ವಾರ್ಡ್ ರಸ್ತೆಗೆ ವಾರ್ಡ್ ಕೌನ್ಸಿಲರ್ ಪ್ರವೀಣ್ಬಗಂಬಿಲ ರವರ ಅನುದಾನದಲ್ಲಿ ಬಹುಕಾಲದ ಬೇಡಿಕೆಯಾದ ರಸ್ತೆ ಅಗಲೀಕರಣ ಮತ್ತು ಇಂಟರ್ಲಾಕ್ ಅಳವಡಿಕೆಯಾದ ರಸ್ತೆಯ ಉದ್ಘಾಟನೆಯನ್ನು ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷರಾದ ಶ್ರೀ ಜಗದೀಶ್ ಆಳ್ವ ಕುವೆತ್ತಬೈಲ್ ಮತ್ತು
ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದಿವ್ಯ ಸತೀಶ್ ಶೆಟ್ಟಿ ರವರ ಉಪಸ್ಥಿತಿಯಲ್ಲಿ ಸ್ಥಳೀಯ ಹಿರಿಯರಾದ ಹೇಮಾವತಿ ಮತ್ತು ವಾರಿಜ ರವರು ಉದ್ಘಾಟನೆಯನ್ನು ನೆರವೇರಿಸಿದರು.

ಇದೇ ಸಂಧರ್ಭದಲ್ಲಿ ಎಲ್ಲರ ನೆಚ್ಚಿನ ಕೌನ್ಸಿಲರ್ ಪ್ರವೀಣ್ ಬಗಂಬಿಲ ರವರಿಗೆ ನಾಗರಿಕರು ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಮಂಡಲದ ಪ್ರಧಾನ ಕಾರ್ಯದರ್ಶಿ ದಯಾನಂದ್ ತೊಕ್ಕೊಟ್ಟು , ಮಂಡಲ ಓಬಿಸಿ ಮೋರ್ಚಾ ಉಪಾಧ್ಯಕ್ಷರು ರೂಪಾ ಶೇಖರ್ ಕೋಟೆಕಾರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅತುಲ್ ಬಗಂಬಿಲ, ಕೊಂಡಾಣ ಶಕ್ತಿ ಕೇಂದ್ರ ಪ್ರಮುಖ್ ನಿತಿನ್ ಪೂಜಾರಿ, ಮಾಜಿ ಪಂಚಾಯತ್ ಸದಸ್ಯೆ ಜಲಜಾಕ್ಷಿ, ಬೂತ್ ಅಧ್ಯಕ್ಷರಾದ ರವಿಪ್ರಸಾದ್, ಕಾರ್ಯದರ್ಶಿ ಗಣೇಶ್ ಪೂಜಾರಿ, ಸೂರಜ್, ಪ್ರವೀಣ್ ಕೆಪಿ, ಜಾನ್ ನ್ಯೂಟನ್ ಪ್ರವೀಶ್, ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು

ಬಜಕೂಡ್ಲಿನಲ್ಲಿ ವನಮಹೋತ್ಸವ ಕಾರ್ಯಕ್ರಮ

ಬಜಕೂಡ್ಲು ಜೂ 07 : ಮಹಾಲಿಂಗೇಶ್ವರ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ಬಜಕೂಡ್ಲು ಇದರ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ನಡೆಯಿತು. ಹೆಣ್ಮಕಜೆ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಪ್ಪ ಬಜಕೂಡ್ಲು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯರು ಹಾಜರಿದ್ದರು.

ಬೆಂಗಳೂರಿನಲ್ಲಿ ಗ್ಯಾಂಗ್ ನಿಂದ ರೌಡಿಶೀಟರ್ ಕೊಲೆ

ಬೆಂಗಳೂರು ಜೂ 7 : ರೌಡಿಶೀಟರ್ ನನ್ನು ಅಪರಿಚಿತ ಗುಂಪೊಂದು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೊಲೆಯಾದ ರೌಡಿಶೀಟರ್ ನ ಹೆಸರು ಖಲೀಮ್ ಉಲ್ಲಾಖಾನ್ (36). ಈತ ಫೋನ್ನಲ್ಲಿ ಮಾತನಾಡುತ್ತಿದ್ದಾಗ ಅಪರಿಚಿತರ ಗುಂಪೊಂದು ಅಟ್ಟಾಡಿಸಿಕೊಂಡು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದಿದ್ದಾರೆ.

ಹತ್ಯೆ ಮಾಡಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಹೊಟ್ಟೆಯ ಭಾಗಕ್ಕೆ ಮಾರಕಾಸ್ತ್ರಗಳಿಂದ ಇಪ್ಪತ್ತಕ್ಕೂ ಹೆಚ್ಚು ಬಾರಿ ಇರಿದು ಹಲ್ಲೆ ಮಾಡಿ ಕೊಲೆಗೈದಿದ್ದಾರೆ.

ಹೊಸಕೋಟೆ ಸರಕಾರಿ ಆಸ್ಪತ್ರೆಗೆ ಮೃತ ದೇಹವನ್ನು ರವಾನಿಸಲಾಗಿದೆ. ಈ ಘಟನೆಯು ಸೂಲಿಬೆಲೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಪಕ್ಷದ ಶುದ್ಧೀಕರಣ ವಿಚಾರ… ಹೇಳಿಕೆ ತಿರುಚಲಾಗಿದೆ – ಡಿ. ವಿ. ಸದಾನಂದ ಗೌಡ

ಪಕ್ಷ ಶುದ್ಧೀಕರಣ ವಿಚಾರದಲ್ಲಿ ಪುತ್ತೂರು ನನ್ನ ಲೆವೆಲ್ನದ್ದಲ್ಲ ಎಂದು ಮಾಧ್ಯಮದ ಮುಂದೆ ನೀಡಿರುವ ಹೇಳಿಕೆಯನ್ನು ತಿರುಚಲಾಗಿದೆ. ಹಾಗೂ ಈ ಹೇಳಿಕೆಯನ್ನು ಅಪಾರ್ಥವಾಗುವ ರೀತಿಯಲ್ಲಿ ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಚಾರಿತ್ರಿಯ ವಧೆ ಮಾಡುತ್ತಿರುವುದು ನೋವು ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಹೇಳಿದ್ದಾರೆ.

ಅದು ನನ್ನ ಮಟ್ಟದಲ್ಲಿ ನಿರ್ಧಾರವಾಗುವ ವಿಷಯವಲ್ಲ. ಈ ವಿಷಯದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರ ಪಕ್ಷದ ಹಿರಿಯ ನಾಯಕರಿಗೆ ಸೇರಿದ್ದು, ನಾನು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂಬುದಾಗಿತ್ತು ಎಂದು ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಆದರೆ ತಮ್ಮ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ತಿರುಚಿ, ಪುತ್ತೂರು ಹಾಗೂ ಪಕ್ಷದ ಬಗ್ಗೆ ನಿರ್ಲಕ್ಷ ಧೋರಣೆ ಹೊಂದಿರುವಂತೆ ತೋರಿಸಲಾಗುತ್ತಿದೆ ಎಂದು ಹೇಳಿದರು.

ಪಕ್ಷದ ನಾಯಕತ್ವ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ತಾನು ಬದ್ಧನಾಗಿದ್ದು ಪಕ್ಷದ ಹಿತಾಸಕ್ತಿಯೇ ತನ್ನ ಆದ್ಯತೆಯಾಗಿದೆ. ಪುತ್ತೂರು ಮತ್ತು ಪಕ್ಷದ ಬಗ್ಗೆ ತಮಗೆ ಅಪಾರ ಗೌರವವಿದ್ದು ರಾಜಕೀಯ ಜೀವನದಲ್ಲಿ ದೊರೆತ ಅವಕಾಶಗಳು ಹಾಗೂ ಬೆಂಬಲವನ್ನು ಸದಾ ಸ್ಮರಿಸುತ್ತೇನೆ. ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸದೆ ಅದರ ನಿಜವಾದ ಆಶಯವನ್ನು ಗಮನಿಸುವಂತೆ ಅವರು ಮನವಿ ಮಾಡಿದ್ದಾರೆ.

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಮತ್ತೆ ಏರಿಕೆ 

ಗೃಹಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ ರೂ. 29 ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳಲ್ಲಿ ಇದು ಎರಡನೇ ಬಾರಿ ದರ ಏರಿಕೆಯಾಗಿದೆ. ಪೆಟ್ರೋಲ್, ಡೀಸೆಲ್ ಹಾಗೂ ಸಿಎನ್‌ಜಿ ಬೆಲೆ ಏರಿಕೆಯ ನಡುವೆಯೇ ದೇಶದ ಜನಸಾಮಾನ್ಯರಿಗೆ ಮತ್ತೊಂದು ಆಘಾತವಾಗಿದೆ.

ಹೊಸ ಪರಿಷ್ಕೃತ ದರದಂತೆ, ದೆಹಲಿಯಲ್ಲಿ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ರೂ. 913ರಿಂದ ರೂ. 942ಕ್ಕೆ ಏರಿಕೆಯಾಗಿದೆ. ಪರಿಷ್ಕೃತ ದರಗಳು ಜೂನ್ 7ರಿಂದಲೇ ಜಾರಿಗೆ ಬಂದಿವೆ ಎಂದು ಉದ್ಯಮ ಮೂಲಗಳು ತಿಳಿಸಿವೆ.

ದರ ಏರಿಕೆಗೆ ಕಾರಣ : ಮಧ್ಯಪ್ರಾಚ್ಯದಲ್ಲಿ ಮುಂದುವರಿಯುತ್ತಿರುವ ಸಂಘರ್ಷ ಮತ್ತು ಜಾಗತಿಕ ಮಟ್ಟದಲ್ಲಿ ತೈಲ ಹಾಗೂ ಅನಿಲ ಪೂರೈಕೆಯ ಮೇಲಿನ ಒತ್ತಡದಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ಏರಿಕೆ ಕಂಡಿವೆ. ಇದರ ಪರಿಣಾಮ ದೇಶೀಯ ಎಲ್‌ಪಿಜಿ ದರಗಳ ಮೇಲೂ ಬಿದ್ದಿದೆ.ಈ ಮೊದಲು ಮಾರ್ಚ್ 7ರಂದು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ರೂ. 60 ಹೆಚ್ಚಿಸಲಾಗಿತ್ತು. ಇದೀಗ ಮತ್ತೆ ರೂ. 29 ಏರಿಕೆಯಾಗಿರುವುದರಿಂದ ಕುಟುಂಬಗಳ ಮಾಸಿಕ ಖರ್ಚಿನ ಮೇಲೆ ಹೆಚ್ಚುವರಿ ಹೊರೆ ಬೀಳಲಿದೆ.

ಸರ್ಕಾರ ಕೈಗೊಂಡಿರುವ ಕ್ರಮಗಳೇನು?: ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಮಾತನಾಡಿ, ದೇಶದಲ್ಲಿ ಎಲ್‌ಪಿಜಿ ಲಭ್ಯತೆಯನ್ನು ಸಮರ್ಪಕವಾಗಿ ಕಾಯ್ದುಕೊಳ್ಳಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು. ದೇಶೀಯ ಉತ್ಪಾದನೆ ಹೆಚ್ಚಿಸುವುದು, ಅಗತ್ಯ ಪ್ರಮಾಣದ ಆಮದು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಹಲವು ಕ್ರಮಗಳ ಮೂಲಕ ಪೂರೈಕೆ ವ್ಯವಸ್ಥೆಯನ್ನು ಹೆಚ್ಚಿಸಲಾಗಿದೆ ಎಂದು ಅವರು ಹೇಳಿದರು. ಎಲ್‌ಪಿಜಿ ದರ ಏರಿಕೆ ದೇಶಾದ್ಯಂತ ಅನ್ವಯವಾಗಲಿದ್ದರೂ, ಸ್ಥಳೀಯ ತೆರಿಗೆಗಳು ಮತ್ತು ಸಾರಿಗೆ ವೆಚ್ಚಗಳ ವ್ಯತ್ಯಾಸದಿಂದ ವಿವಿಧ ನಗರಗಳಲ್ಲಿ ಬೆಲೆಯಲ್ಲಿ ಬದಲಾವಣೆ ಕಂಡುಬರಲಿದೆ.

ಏಷ್ಯಾ ಕಪ್ U-18 2026, ಚಿನ್ನ ಗೆದ್ದ ಪುರುಷರ ತಂಡ, ಕಂಚಿನ ಪದಕ ಗೆದ್ದ ಮಹಿಳೆಯರ ತಂಡ

ಜಪಾನ್‌ನ ಕಾಕಮಿಗಹರಾದಲ್ಲಿ ನಡೆದ 2026 ರ ಪುರುಷರ 18 ವರ್ಷದೊಳಗಿನವರ ಹಾಕಿ ಏಷ್ಯಾಕಪ್‌ಫೈನಲ್‌ ಪಂದ್ಯದಲ್ಲಿ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದೆ.

ಆತಿಥೇಯ ಜಪಾನ್ ತಂಡವನ್ನು ಅವರದೇ ಅಂಗಳದಲ್ಲಿ 4-1 ಗೋಲುಗಳಿಂದ ಸೋಲಿಸಿ ಭಾರತದ ಯುವ ಹಾಕಿ ಪಡೆ ಅದ್ಭುತ ಪ್ರದರ್ಶನ ನೀಡಿ, ಗೆದ್ದು ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ. ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಶಿಶ್ ತಾನಿ ಪೂರ್ಣಿ, ಫೈನಲ್‌ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿ ತಂಡವನ್ನು ಚಾಂಪಿಯನ್ ಮಾಡಿದರು.

28ನೇ ನಿಮಿಷದಲ್ಲಿ, ಆಶಿಶ್ ತಾನಿ ಪೂರ್ಣಿ ತಮ್ಮ ಎರಡನೇ ಗೋಲು ಬಾರಿಸಿ ಭಾರತದ ಮುನ್ನಡೆಯನ್ನು 2-0 ಗೆ ವಿಸ್ತರಿಸಿದರು. ಕೇವಲ ಎರಡು ನಿಮಿಷಗಳ ನಂತರ, ನಾಯಕ ಕೇತನ್ ಕುಶ್ವಾಹ, ಪ್ರಹ್ಲಾದ್ ರಾಜ್‌ಭರ್ ನೀಡಿದ ಅದ್ಭುತ ಪಾಸ್‌ನಲ್ಲಿ ಅದ್ಭುತ ಫೀಲ್ಡ್ ಗೋಲು ಬಾರಿಸಿದರು. ಈ ಮೂಲಕ ಭಾರತ ತಂಡ ಪಂದ್ಯದ ಅರ್ಧಾವಧಿಯಲ್ಲಿ 3-0 ಮುನ್ನಡೆಯನ್ನು ಪಡೆದುಕೊಂಡಿತು. ಮೂರನೇ ಕ್ವಾರ್ಟರ್‌ನಲ್ಲಿಯೂ ಭಾರತದ ಪ್ರಾಬಲ್ಯ ಮುಂದುವರೆಯಿತು. 34ನೇ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿ ಕಾರ್ನರ್ ಅನ್ನು ಆಶಿಶ್ (34′) ಗೋಲಾಗಿ ಪರಿವರ್ತಿಸಿದರು, ಇದರಿಂದಾಗಿ ಸ್ಕೋರ್ 4-0ಗೆ ತಲುಪಿತು. ನಾಲ್ಕನೇ ಕ್ವಾರ್ಟರ್‌ನಲ್ಲಿ, ಜಪಾನ್‌ನ ನುಮಾಡಾ ಗಕು (52′) ಪೆನಾಲ್ಟಿ ಸ್ಟ್ರೋಕ್‌ ಮೂಲಕ ತಂಡದ ಪರ ಏಕೈಕ ಗೋಲು ದಾಖಲಿಸಿದರು. ಆದರೆ ಆ ಹೊತ್ತಿಗೆ ಭಾರತದ ಗೆಲುವು ಖಚಿತವಾಗಿತ್ತು.

ಪುರುಷರ ತಂಡದ ಜೊತೆಗೆ, ಮಹಿಳಾ ತಂಡವೂ ಕಂಚಿನ ಪದಕ ಗೆದ್ದಿತು. ಈ ಅದ್ಭುತ ಪ್ರದರ್ಶನದ ನಂತರ, ಹಾಕಿ ಇಂಡಿಯಾ ಎರಡೂ ತಂಡಗಳಿಗೆ ನಗದು ಬಹುಮಾನವನ್ನು ಘೋಷಿಸಿದೆ. ಚಿನ್ನದ ಪದಕ ಗೆದ್ದ ಭಾರತೀಯ ಅಂಡರ್ -18 ಪುರುಷರ ಹಾಕಿ ತಂಡದ ಪ್ರತಿಯೊಬ್ಬ ಆಟಗಾರನಿಗೆ ತಲಾ 3 ಲಕ್ಷ ಮತ್ತು ಸಹಾಯಕ ಸಿಬ್ಬಂದಿಯ ಪ್ರತಿಯೊಬ್ಬ ಸದಸ್ಯನಿಗೆ ತಲಾ 1.5 ಲಕ್ಷ ನಗದು ಬಹುಮಾನವನ್ನು ನೀಡಿದೆ. ಭಾರತೀಯ ಅಂಡರ್ -18 ಮಹಿಳಾ ಹಾಕಿ ತಂಡದ ಪ್ರತಿಯೊಬ್ಬ ಆಟಗಾರ್ತಿಯರಿಗೆ ತಲಾ 1 ಲಕ್ಷ ಮತ್ತು ಸಹಾಯಕ ಸಿಬ್ಬಂದಿಗೆ ತಲಾ 50,000 ನಗದು ಬಹುಮಾನವನ್ನು ಘೋಷಿಸಿದೆ.