ಕೊಡಗಿನಲ್ಲಿ ತಾಯಿ-ಮಗು ಮತಾಂತರ : ಲವ್ ಜಿಹಾದ್ ಹಾಗೂ ಮತಾಂತರದ ದೊಡ್ಡ ಸಂಚು

ಕೊಡಗಿನ ಕುಶಾಲನಗರದಿಂದ ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸಚಿತಾ ಮತ್ತು ಅವರ 9 ವರ್ಷದ ಮಗು ಕೇರಳದ ಮಲಪ್ಪುರಂ ಜಿಲ್ಲೆಯ ಮದರಸವೊಂದರಲ್ಲಿ ಪತ್ತೆಯಾಗಿದ್ದಾರೆ. ಸಚಿತಾ ಕೆಲಸ ಮಾಡುತ್ತಿದ್ದ ಅಂಗಡಿಯ ಮಾಲೀಕ ಸಲೀಂ ಎಂಬಾತನ ಪ್ರಭಾವದಿಂದ ಈಕೆ ಮಗುವಿನೊಂದಿಗೆ ಕೇರಳಕ್ಕೆ ಹೋಗಿದ್ದು, ಅಲ್ಲಿ ಧರ್ಮ ಬದಲಾಯಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಮಗುವಿಗೂ ಮತಾಂತರ ಮಾಡಲಾಗಿದೆ ಎಂದು ವರದಿಯಾಗಿದೆ.

ಈ ಪ್ರಕರಣದ ಹಿಂದೆ ಮತಾಂತರ ಮತ್ತು ‘ಲವ್ ಜಿಹಾದ್’ ಸಂಚು ಇರುವುದಾಗಿ ಹಿಂದೂಪರ ಸಂಘಟನೆಗಳು ಆರೋಪಿಸಿವೆ. ಪತ್ನಿ ಹಾಗೂ ಮಗು ಕಾಣೆಯಾಗಿದ್ದ ಬಳಿಕ ಮಹಿಳೆಯ ಪತಿ ಸಾಕಷ್ಟು ಹುಡುಕಾಟ ನಡೆಸಿದ್ದರು. ನಂತರ ಪತ್ನಿ ಕೆಲಸ ಮಾಡುತ್ತಿದ್ದ ಅಂಗಡಿ ಮೇಲೆ ಅನುಮಾನ ವ್ಯಕ್ತಪಡಿಸಿ, ಹಿಂದೂಪರ ಸಂಘಟನೆಗಳ ಸಹಕಾರದೊಂದಿಗೆ ಕುಶಾಲನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲೀಂ ಮತ್ತು ಜಲೀಲ್ ಎಂಬುವರನ್ನು ಪೊಲೀಸರು ಬಂಧಿಸಿದ್ದು, ಸಮಗ್ರ ತನಿಖೆಯನ್ನು ನಡೆಸುತ್ತಿದ್ದಾರೆ.