ಬೆಳ್ತಂಗಡಿ : 2023 ರಲ್ಲಿ ನಡೆದ ಲೈಂಗಿಕ ದೌರ್ಜನ್ಯ ತಡವಾಗಿ ಬೆಳಕಿಗೆ, ಪೊಲೀಸರಿಂದ ತನಿಖೆ

file photo

ಬೆಳ್ತಂಗಡಿ ಸಮೀಪದ ಡ್ಯಾಂ ಒಂದರ ಬಳಿ 2023ರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ವೇಣೂರು ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ತಮ್ಮ ಮಗಳ ಮೇಲೆ ಸಂಬಂಧಿಕನೊಬ್ಬ ಹಾಗೂ ಆತನ ಸ್ನೇಹಿತನಿಂದ ದೌರ್ಜನ್ಯ ಮತ್ತು ಜೀವಬೆದರಿಕೆ ನಡೆದಿರುವುದನ್ನು ಪೋಷಕರು ಇತ್ತೀಚೆಗೆ ಗಮನಿಸಿ, ಜೂನ್ 23 ರಂದು ದೂರು ನೀಡಿದ್ದಾರೆ.

2023 ರಲ್ಲಿ, ಈ ಬಾಲಕರು ಬೆಳ್ತಂಗಡಿಯ ಡ್ಯಾಂ ಒಂದರ ಬಳಿಯಿರುವ ಕಟ್ಟಡಕ್ಕೆ ಸಂತ್ರಸ್ತ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವುದು ಹಾಗೂ ಬಾಲಕಿಗೆ ಜೀವಬೆದರಿಕೆ ಒಡ್ಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಈ ದೂರಿನ ಆಧಾರದ ಮೇಲೆ, ಐಪಿಸಿ ಸೆಕ್ಷನ್ 376, 376AB, 376DB, 506, 34 ಹಾಗೂ ಪೋಕ್ಸೋ ಕಾಯ್ದೆಯಡಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ದಾವಣಗೆರೆಯಲ್ಲಿ ಜಿಹಾದಿ ಉಗ್ರಗಾಮಿ ಪತ್ತೆ : ಅಯೋಧ್ಯೆ ಮಂದಿರ ಸ್ಫೋಟಿಸಲು ಸಂಚು

ಫೋಟೋ ಕೃಪೆ : public tv

ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಅನುಮಾನದೊಂದಿಗೆ ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ, ಉತ್ತರ ಪ್ರದೇಶ ಮೂಲದ ಸುಹೇಲ್(20) ಎಂಬಾತನನ್ನು ದಾವಣಗೆರೆ ಪೊಲೀಸರು ಮತ್ತು ಕೇಂದ್ರ ಗುಪ್ತಚರ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿವೆ.

  • ಬಂಧನ ಮತ್ತು ಹಿನ್ನೆಲೆ: ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಅಡಗಿದ್ದಾಗ ಆರೋಪಿಯನ್ನು ಬಂಧಿಸಲಾಗಿದ್ದು, ಈತ ಅಯೋಧ್ಯೆ ರಾಮಮಂದಿರವನ್ನು ಗುರಿಯಾಗಿಸುವ ಸಂಚು ಹೊಂದಿದ್ದ ಎಂಬ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ಹೊರಬಿದ್ದಿದೆ.
  • ವಿದೇಶಿ ಸಂಪರ್ಕ: ಆರೋಪಿಯ ಮೊಬೈಲ್ ಪರಿಶೀಲಿಸಿದಾಗ ಪಾಕಿಸ್ತಾನದ ಸಂಪರ್ಕಗಳು ಪತ್ತೆಯಾಗಿವೆ. ‘ರಾಣಾ ಭಾಯ್’ ಎಂಬ ಹೆಸರಿನಲ್ಲಿ ಪಾಕಿಸ್ತಾನದ ಕೋಡ್ (+92) ಹೊಂದಿರುವ ಸಂಖ್ಯೆಯನ್ನು ಸೇವ್ ಮಾಡಿಕೊಂಡಿದ್ದ ಹಾಗೂ ಸೋಷಿಯಲ್ ಮೀಡಿಯಾ ಮೂಲಕ ವಿದೇಶಿ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದೆ.
  • ತನಿಖೆಯ ಪ್ರಗತಿ: ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ತುಮಕೂರು ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು, ನಂತರ ಪ್ರಕರಣ ದಾಖಲಿಸಿ ಮುಂದಿನ ತನಿಖೆಗಾಗಿ ಹರಿಹರ ಗ್ರಾಮಾಂತರ ಠಾಣೆಗೆ ಕರೆತರಲಾಗಿದೆ. ಪ್ರಿಯಾಂಕ್ ಬರ್ಗೆ ಅವರು ಈತ ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದನ್ನು ದೃಢಪಡಿಸಿದ್ದಾರೆ.
  • ಇತರೆ ಸಾಕ್ಷ್ಯಗಳು: ಆನ್‌ಲೈನ್ ಗುಂಪುಗಳಲ್ಲಿ ಸಕ್ರಿಯವಾಗಿದ್ದ ಕುರಿತ ಮಾಹಿತಿ ಮತ್ತು ಶಸ್ತ್ರಾಸ್ತ್ರಗಳೊಂದಿಗೆ ತೆಗೆಸಿಕೊಂಡ ಫೋಟೋಗಳು ಆತನ ಮೊಬೈಲ್‌ನಲ್ಲಿ ಪತ್ತೆಯಾಗಿವೆ.
ಚಿಕ್ಕಮಗಳೂರು : ಹುಡುಗಿ ನಾಪತ್ತೆ ಪ್ರಕರಣ. ಸ್ನೇಹಿತ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಕೂಡ್ಲು ಗ್ರಾಮ ದಲ್ಲಿ ಯುವತಿ ಒಬ್ಬಳು ಪ್ರಿಯಕರನೊಂದಿಗೆ ಓಡಿ ಹೋಗಿದ್ದು, ಆಕೆಯ ತಂದೆ ಅವಳ ಸ್ನೇಹಿತನಿಗೆ ಈ ವಿಷಯದಲ್ಲಿ ಬೈದು ವಿಚಾರಿಸಿದ್ದಾರೆ. ಇದರಿಂದ ಮನನೊಂದ ಆಕೆಯ ಸ್ನೇಹಿತ ಚಂದನ್ (20) ಆತ್ಮಹತ್ಯೆಗೆ ಶರಣಾಗಿದ್ದಾನೆ.

ಜೂನ್ 14 ರಂದು ಅದೇ ಗ್ರಾಮದ 18 ವರ್ಷದ ಯುವತಿ ಪತ್ರ ಬರೆದಿಟ್ಟು ತನ್ನ ಪ್ರಿಯಕರನೊಂದಿಗೆ ಹೋಗಿದ್ದಳು. ಆದರೆ ಆಕೆಯ ತಂದೆ ಚಂದನ್ ಗೆ ಇದಕ್ಕೆ ನೀನೆ ಕಾರಣ… ಆಕೆ ಎಲ್ಲಿ ಇದ್ದಾಳೆ ಎಂದು ಹೇಳು ಎಂದು ಜಗಳವಾಡಿದ್ದರು.

ಇದರ ಬಗ್ಗೆ ತನಿಖೆ ಶುರು ಮಾಡಿದ ಬೀರೂರು ಪೊಲೀಸರು ಕಾಲ್ ನ ಆಧಾರದ ಮೇಲೆ ಜೂನ್ 21 ಕ್ಕೆ ಚಂದನ್ ನನ್ನು ಕರೆಸಿ ವಿಚಾರಣೆ ಮಾಡಿ ಕಳುಹಿಸಿದ್ದರು. ಆ ದಿನ ಮನೆಗೆ ಹೋದ ಚಂದನ್ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.

ಇದರ ಬಗ್ಗೆ ದಲಿತ ಸಂಘಟನೆಗಳು ಪೊಲೀಸ್ ಠಾಣೆ ಬಳಿ ಪ್ರತಿಭಟನೆ ಮಾಡಿದರು. ಹುಡುಗನ ಸಾವಿಗೆ ನ್ಯಾಯ ಸಿಗಬೇಕೆಂದು ಮನವಿ ಮಾಡಿದರು. ಈ ಬಗ್ಗೆ ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹುಡುಗನ ಸಾವು ಹಾಗೂ ಹುಡುಗಿಯ ನಾಪತ್ತೆಯ ಬಗ್ಗೆ ವಿಷಯ ಹೊರಬರಬೇಕಿದೆ.

ಧರ್ಮಸ್ಥಳ ಸಂಘದ ಸಹಾಯಕಿಯ ಚಿನ್ನದ ಸರ ಕಸಿದು ಪರಾರಿ

ಹೊಸಂಗಡಿಯ ಸರ್ವಿಸ್ ರಸ್ತೆಯಲ್ಲಿ ಇಂದು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ದರೋಡೆಕೋರರು ಮಹಿಳೆಯೊಬ್ಬರ ಕೊರಳಿನಲ್ಲಿದ್ದ ಎರಡೂವರೆ ಪವನ್ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ನಯನ ಎಂಬುವವರ ಬಳಿ, ಸ್ಕೂಟಿಯಲ್ಲಿ ಬಂದ ಇಬ್ಬರು ಅಪರಿಚಿತರು ದಾರಿ ಕೇಳುವ ನೆಪದಲ್ಲಿ ಸಮೀಪಿಸಿದ್ದಾರೆ. ಅವರು ಮಾತನಾಡುತ್ತಿರುವಂತೆಯೇ ಹಠಾತ್ತನೆ ದಾಳಿ ಮಾಡಿದ ದುಷ್ಕರ್ಮಿಗಳು, ನಯನ ಅವರ ಕುತ್ತಿಗೆಯಲ್ಲಿದ್ದ ಸರವನ್ನು ಎಗರಿಸಿ ವಾಮಂಜೂರು ಕಡೆಗೆ ವೇಗವಾಗಿ ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಮೂಲಕ ತನಿಖೆ ನಡೆಸುತ್ತಿದ್ದಾರೆ.

ಬೆಳಗಾವಿಯಲ್ಲಿ ದಾರುಣ ಘಟನೆ: ಮಾಜಿ ಯೋಧನ ಕೊಲೆ, ಮಗಳ ಕೃತ್ಯಕ್ಕೆ ತಾಯಿ ಆತ್ಮಹತ್ಯೆ

​ಬೆಳಗಾವಿಯಲ್ಲಿ ನಡೆದ ಮಾಜಿ ಸೈನಿಕ ಸಂದೀಪ್ ಮಂಜರಗಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ದುರಂತ ಘಟನೆ ಸಂಭವಿಸಿದೆ. ತನ್ನ ಮಗಳು ಸುಮಾ ಮಂಜರಗಿ, ಎರಡು ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದ ಕೃತ್ಯದಿಂದ ತೀವ್ರ ಮನನೊಂದಿದ್ದ ಆಕೆಯ ತಾಯಿ ಮಹಾದೇವಿ (57), ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

​ಮಗಳು ಮಾಡಿರುವ ಹೀನಾಯ ಕೃತ್ಯ ಹಾಗೂ ಆಕೆಯ ಬಂಧನದಿಂದ ಕಂಗಾಲಾಗಿದ್ದ ಮಹಾದೇವಿ ಅವರು, ಸಮಾಜದಲ್ಲಿನ ಮರ್ಯಾದೆಗೆ ಅಂಜಿ ಮತ್ತು ತೀವ್ರ ಮಾನಸಿಕ ಆಘಾತದಿಂದ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ:

ಮಾಜಿ ಯೋಧ ಸಂದೀಪ್ ಮಂಜರಗಿ ಅವರ ಹೆಸರಿನಲ್ಲಿದ್ದ ಎಚ್‌ಡಿಎಫ್‌ಸಿ (HDFC) ಮತ್ತು ಎಸ್‌ಬಿಐ (SBI) ವಿಮಾ ಪಾಲಿಸಿಗಳ ಮೇಲೆ ಕಣ್ಣಿಟ್ಟಿದ್ದ ಪತ್ನಿ ಸುಮಾ, ಅಪಘಾತದ ನೆಪದಲ್ಲಿ ಆತನನ್ನು ಕೊಲ್ಲಲು ಸಂಚು ರೂಪಿಸಿದ್ದಳು. ಪತಿ ಮೃತಪಟ್ಟರೆ ಸಿಗುವ ಎರಡು ಕೋಟಿ ರೂಪಾಯಿಗಳ ಆಸೆಗಾಗಿ, ಪ್ರಿಯಕರ ಮತ್ತು ಇತರರ ಸಹಾಯದಿಂದ ಈ ಕೃತ್ಯ ಎಸಗಿದ್ದಳು.

​ಆರಂಭದಲ್ಲಿ ಈ ಸಾವನ್ನು ಅಪಘಾತ ಎಂದು ನಂಬಿಸಲು ಆರೋಪಿಗಳು ಪ್ರಯತ್ನಿಸಿದ್ದರು. ಆದರೆ, ತನಿಖೆ ನಡೆಸಿದ ಪೊಲೀಸರು ಪ್ರಕರಣದ ನಿಗೂಢತೆಯನ್ನು ಭೇದಿಸಿ, ಸುಮಾಳನ್ನು ಆಕೆಯ ಪ್ರಿಯಕರ ಮತ್ತು ಕೆಲ ಸರ್ಕಾರಿ ನೌಕರರು ಸೇರಿದಂತೆ ಒಟ್ಟು 9 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಈ ಪ್ರಕರಣವು ತಾಯಿಯ ಆತ್ಮಹತ್ಯೆಯೊಂದಿಗೆ ಮತ್ತೊಂದು ದುರಂತಕ್ಕೆ ಸಾಕ್ಷಿಯಾಗಿದೆ.

ಕೊಡಗಿನಲ್ಲಿ ತಾಯಿ-ಮಗು ಮತಾಂತರ : ಲವ್ ಜಿಹಾದ್ ಹಾಗೂ ಮತಾಂತರದ ದೊಡ್ಡ ಸಂಚು

ಕೊಡಗಿನ ಕುಶಾಲನಗರದಿಂದ ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸಚಿತಾ ಮತ್ತು ಅವರ 9 ವರ್ಷದ ಮಗು ಕೇರಳದ ಮಲಪ್ಪುರಂ ಜಿಲ್ಲೆಯ ಮದರಸವೊಂದರಲ್ಲಿ ಪತ್ತೆಯಾಗಿದ್ದಾರೆ. ಸಚಿತಾ ಕೆಲಸ ಮಾಡುತ್ತಿದ್ದ ಅಂಗಡಿಯ ಮಾಲೀಕ ಸಲೀಂ ಎಂಬಾತನ ಪ್ರಭಾವದಿಂದ ಈಕೆ ಮಗುವಿನೊಂದಿಗೆ ಕೇರಳಕ್ಕೆ ಹೋಗಿದ್ದು, ಅಲ್ಲಿ ಧರ್ಮ ಬದಲಾಯಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಮಗುವಿಗೂ ಮತಾಂತರ ಮಾಡಲಾಗಿದೆ ಎಂದು ವರದಿಯಾಗಿದೆ.

ಈ ಪ್ರಕರಣದ ಹಿಂದೆ ಮತಾಂತರ ಮತ್ತು ‘ಲವ್ ಜಿಹಾದ್’ ಸಂಚು ಇರುವುದಾಗಿ ಹಿಂದೂಪರ ಸಂಘಟನೆಗಳು ಆರೋಪಿಸಿವೆ. ಪತ್ನಿ ಹಾಗೂ ಮಗು ಕಾಣೆಯಾಗಿದ್ದ ಬಳಿಕ ಮಹಿಳೆಯ ಪತಿ ಸಾಕಷ್ಟು ಹುಡುಕಾಟ ನಡೆಸಿದ್ದರು. ನಂತರ ಪತ್ನಿ ಕೆಲಸ ಮಾಡುತ್ತಿದ್ದ ಅಂಗಡಿ ಮೇಲೆ ಅನುಮಾನ ವ್ಯಕ್ತಪಡಿಸಿ, ಹಿಂದೂಪರ ಸಂಘಟನೆಗಳ ಸಹಕಾರದೊಂದಿಗೆ ಕುಶಾಲನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲೀಂ ಮತ್ತು ಜಲೀಲ್ ಎಂಬುವರನ್ನು ಪೊಲೀಸರು ಬಂಧಿಸಿದ್ದು, ಸಮಗ್ರ ತನಿಖೆಯನ್ನು ನಡೆಸುತ್ತಿದ್ದಾರೆ.

ಉಪ್ಪಿನಂಗಡಿ : ಅಕ್ರಮ ಜಾನುವಾರು ಸಾಗಾಟ, ಇಬ್ಬರ ಬಂಧನ

ಉಪ್ಪಿನಂಗಡಿಯ ನೆಕ್ಕಿಲಾಡಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಈಚರ್ ಲಾರಿಯನ್ನು ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಓರ್ವ ಪರಾರಿಯಾಗಿದ್ದಾನೆ. ಲಾರಿಯಲ್ಲಿದ್ದ 16 ಜಾನುವಾರುಗಳನ್ನು ರಕ್ಷಿಸಲಾಗಿದೆ.

​ಹಾಸನದಿಂದ ಕೇರಳದ ಪಾಲಕ್ಕಾಡ್‌ಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಉಪ್ಪಿನಂಗಡಿ ಪೊಲೀಸರು 34 ನೆಕ್ಕಿಲಾಡಿಯ ಆನೆಬೈಲ್‌ನಲ್ಲಿ ತಡೆಹಿಡಿದಿದ್ದಾರೆ.

ಈ ಪ್ರಕರಣದಲ್ಲಿ ಲಾರಿ ಚಾಲಕ ಪರ್ದಿನ್ ಖಾನ್ ಮತ್ತು ಜಾವೀದ್ ಪಾಷಾ ಎಂಬುವವರನ್ನು ಬಂಧಿಸಲಾಗಿದೆ. ಇದೇ ವೇಳೆ, ರೆಹಮಾನ್ ಹೊಸೂರು ಎಂಬ ವ್ಯಕ್ತಿ ಸ್ಥಳದಿಂದ ತಪ್ಪಿಸಿಕೊಂಡಿದ್ದಾನೆ.

ಜೂನ್ 17ರ ನಸುಕಿನ ಜಾವ ಉಪನಿರೀಕ್ಷಕ ಸುತೇಶ್ ಕೆ.ಪಿ. ಮತ್ತು ಅವರ ತಂಡ ಗಸ್ತು ತಿರುಗುತ್ತಿದ್ದಾಗ, ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 16 ಜಾನುವಾರುಗಳನ್ನು ಪತ್ತೆ ಹಚ್ಚಿ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಿಚಾರಣೆ ನಡೆಸಿದಾಗ, ಆರೋಪಿಗಳು ಹಾಸನ ಸಂತೆಯಲ್ಲಿ ಜಾನುವಾರುಗಳನ್ನು ಖರೀದಿಸಿ ಕೇರಳಕ್ಕೆ ಸಾಗಿಸುತ್ತಿದ್ದ ವಿಷಯ ಬೆಳಕಿಗೆ ಬಂದಿದೆ.

ಸರಕಾರದ ಹಿಂದೂ ದಮನಕಾರಿ ಧೋರಣೆ….ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕರಿಗೆ ಗಡಿಪಾರು ನೋಟೀಸ್

ಹರೀಶ ತಂದೆ ನಿಂಗಪ್ಪ ಹಾನಗಲ್ಲ, ಸಾ : ಅಕ್ಕಿಆಲೂರ ಚನ್ನವೀರೇಶ್ವರ ನಗರ, ತಾ : ಹಾನಗಲ್ಲ ಇವರು ಕಳೆದ 10 ವರ್ಷಗಳಿಂದ ಹಿಂದೂ ಹುಡುಗರ ಗುಂಪು ಕಟ್ಟಿಕೊಂಡು, ಜಾನುವಾರುಗಳ ಸಾಗಾಟದ ಮೇಲೆ ದಾಳಿ ಮಾಡುವುದು, ಹಿಂದೂ ಹುಡುಗಿ ಮತ್ತು ಮುಸ್ಲಿಂ ಹುಡುಗರು ಇದ್ದಾಗ ದಾಳಿ ಮಾಡುವುದು, ಲವ್ ಜಿಹಾದ್ ಅಂತ ಪ್ರತಿಭಟನೆ, ಗಲಾಟೆ ಮಾಡುವುದು ಮಾಡುತ್ತಾ ಕೋಮು ಸೌಹಾರ್ದಕ್ಕೆ ಧಕ್ಕೆಯುಂಟು ಮಾಡುವ ಸ್ವಭಾವದವನಾಗಿರುತ್ತಾನೆ ಎಂದು ದೂರು ನೀಡಿರುತ್ತಾರೆ . ಈ ಕಾರಣಗಳು ಸತ್ಯಕ್ಕೆ ದೂರವಾಗಿದ್ದು, ಹಿಂದುತ್ವದ ವಿಚಾರವನ್ನು ಪ್ರಚಾರ ಮಾಡುತ್ತಿರುವ ಅನೇಕರ ಸದ್ದನ್ನು ಗಡಿಪಾರು ನೋಟೀಸ್ ಮೂಲಕ ಹತ್ತಿಕುವ ಯತ್ನ ನಡೆಸಲಾಗುತ್ತಿದೆ.

ಈ ಸಂಬಂಧ ಹಾನಗಲ್ಲ ಮತ್ತು ಆಡೂರ ಪೊಲೀಸ್ ಠಾಣೆಗಳಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿವೆ.

​ಆದೇಶ: ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 135(3) ಅನ್ವಯ, ವಿಚಾರಣೆ ಮುಗಿಯುವವರೆಗೆ ಸಮಾಜದಲ್ಲಿ ಶಾಂತಿ ಕಾಪಾಡುವ ಬಗ್ಗೆ ರೂ. 2,00,000/- (ಎರಡು ಲಕ್ಷ ರೂಪಾಯಿ) ಮೌಲ್ಯದ ಮುಚ್ಚಳಿಕೆಯನ್ನು ಬರೆದುಕೊಡಲು ಆದೇಶಿಸಲಾಗಿದೆ. ಹಾಗೂ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಸಮಜಾಯಿಷಿ ನೀಡಲು ಸೂಚಿಸಲಾಗಿದೆ.

ಜಿಲ್ಲೆಯಲ್ಲಿ ಮತಾಂತರ,ಗೋರಕ್ಷಣೆ, ಲವ್ ಜಿಹಾದ್ ನಂತಹ ಪ್ರಕರಣಗಳು ಸಾಮಾಜಿಕ ಪಿಡುಗು ಆಗಿದ್ದು ಜಿಲ್ಲೆಯಲ್ಲಿ ಮಿತಿಮೀರಿದ್ದು ಇವುಗಳ ವಿರುದ್ಧ ಹೋರಾಟ ಮಾಡುವ ಕಾರ್ಯಕರ್ತರನ್ನು ಗುರಿಯಾಗಿಸಿ ರಾಜಕೀಯ ಒತ್ತಡದಿಂದ ಈ ರೀತಿ ಗಡಿಪಾರು ನೋಟೀಸ್ ನೀಡಲಾಗುತ್ತಿದೆ ಎಂದು ಜಿಲ್ಲೆಯ ಅನೇಕ ಮುಖಂಡರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಶ್ರೀ ಶ್ರೀಕಾಂತ ಹೊಸಕೆರೆ
ಹಿಂದೂ ಜಾಗರಣ ವೇದಿಕೆ ಉತ್ತರ ಪ್ರಾಂತ ಸಹಸಂಯೋಜಕರು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಝಾಕೀರ್ ಸವಣೂರು : ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು

ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ 2022 ಜುಲೈ 26 ರಂದು ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದರು. ಪ್ರವೀಣ್ ನೆಟ್ಟಾರು ಅವರು ಬೆಳ್ಳಾರೆಯಲ್ಲಿ ಅಕ್ಷಯ ಚಿಕನ್ ಸೆಂಟರ್ ನಡೆಸುತ್ತಿದ್ದರು. ಆ ಅಂಗಡಿಯ ಎದುರೇ ಕೊಲೆ ನಡೆದಿತ್ತು. ಅದರಲ್ಲಿ 26 ಮಂದಿಯನ್ನು ಎನ್ ಐ ಎ ಅಧಿಕಾರಿಗಳು ಬಂಧಿಸಿದ್ದರು. ಅದರಲ್ಲಿ ಈಗ 18 ನೆ ಆರೋಪಿ ಝಾಕೀರ್ ಸವಣೂರು (35) ಗೆ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.

ಈ ಹಿಂದೆ ಸೋಮವಾರಪೇಟೆಯ ಎಚ್. ವೈ ರಿಯಾಜ್ ಎಂಬಾತನಿಗೆ ಜಾಮೀನು ಸಿಕ್ಕಿತ್ತು. ಇವನು ಆರೋಪಿಗಳಿಗೆ ಆಶ್ರಯ ನೀಡಿದ್ದ ಎಂಬ ಕಾರಣಕ್ಕೆ ಬಂಧಿಸಲಾಗಿತ್ತು. ಎಚ್. ವೈ ರಿಯಾಜ್ ಪ್ರಕರಣದ 26 ನೇ ಆರೋಪಿಯಾಗಿದ್ದಾನೆ.

ಈಗ ಜಾಮೀನು ಪಡೆದಿರುವ ಆರೋಪಿ ಝಾಕೀರ್ ಸವಣೂರು (35) ಹತ್ಯೆ ಸಂಚಿನಲ್ಲಿ ನೇರವಾಗಿ ಭಾಗಿಯಾದವರಲ್ಲಿ ಒಬ್ಬನಾಗಿದ್ದು, ಪ್ರಕರಣದ ಆರಂಭದಲ್ಲೇ ಬಂಧಿಸಲ್ಪಟ್ಟಿದ್ದಾನೆ. ಈತನನ್ನು ಬೆಳ್ಳಾರೆಯ ಶಫೀಕ್ ಎಂಬಾತನೊಂದಿಗೆ ಜುಲೈ 28 ರಂದು ವಶಕ್ಕೆ ಪಡೆದಿದ್ದರು.

2021 ರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಳ್ಳಾಲ ಪೊಲೀಸ್ ಠಾಣೆ , NDPS ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದ ಆರೋಪಿ ಫಜಲ್ (31), ತಂದೆ ಮೊಹಮ್ಮದ್ ಅಲಿ, ಮೊಹಮ್ಮದ್ ಅಲಿ ಮಂಜಿಲ್, ಪಚ್ಚಿಲಂಬರ್, ಉಪ್ಪಳ, ಕಾಸರಗೋಡು ಜಿಲ್ಲೆ ಕೇರಳ ರಾಜ್ಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳದ ಪಚ್ಚಿಲಂಬರ್ ನಿವಾಸಿ, 31 ವರ್ಷದ ಫಜಲ್‌ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಈತ 2021ರಲ್ಲಿ ದಾಖಲಾದ NDPS ಕಾಯ್ದೆಯಡಿ ಪ್ರಕರಣದ ಆರೋಪಿಯಾಗಿದ್ದಾನೆ.ಆರೋಪಿ 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

2021ರಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದ ಫಜಲ್, ತದನಂತರ ನ್ಯಾಯಾಲಯದ ವಿಚಾರಣೆಗೆ ಗೈರುಹಾಜರಾಗಿ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ಪೊಲೀಸರು ಆತನ ಪತ್ತೆಗೆ ಕಾರ್ಯಾಚರಣೆ ನಡೆಸಿ, ದಿನಾಂಕ 09-06-2026 ರಂದು ಉಪ್ಪಳದಲ್ಲಿರುವ ಆತನ ಮನೆಯಿಂದ ವಶಕ್ಕೆ ಪಡೆದಿದ್ದಾರೆ.

ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿ, ಜೂನ್ 9, 2026ರಂದು ಉಪ್ಪಳದಲ್ಲಿರುವ ಆತನ ಮನೆಯಲ್ಲೇ ವಶಕ್ಕೆ ತೆಗೆದುಕೊಂಡಿದ್ದಾರೆ. ನಂತರ ಆರೋಪಿಯನ್ನು ಮಂಗಳೂರಿನ ಮಾನ್ಯ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಸ್ಪೆಷಲ್ ಕೇಸ್ ನಂಬರ್ 23/2026 ರ ವಿಚಾರಣೆಯಂತೆ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಧಿತ ಆರೋಪಿಯನ್ನು ಮಂಗಳೂರಿನ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯಕ್ಕೆ ಕರೆದೊಯ್ಯಲಾಗಿದ್ದು, ವಿಶೇಷ ಪ್ರಕರಣ ಸಂಖ್ಯೆ 23/2026ರ ವಿಚಾರಣೆ ನಡೆಸಿದ ನ್ಯಾಯಾಲಯವು ಫಜಲ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.